ಮೂಡುಬಿದಿರೆ: ಇಂದ್ರಧನುಷ್ ಅಭಿಯಾನ ಉದ್ಘಾಟನೆ
ಮೂಡುಬಿದಿರೆ, ಜ.4: ರಾಷ್ಟ್ರೀಯ ಆರೋಗ್ಯ ಅಭಿಯಾನದಂಗವಾಗಿ ದ.ಕ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ವತಿಯಿಂದ ಮೂಡುಬಿದಿರೆಯ ಸರಕಾರಿ ಆಸ್ಪತ್ರೆಯಲ್ಲಿ ನಾಲ್ಕನೆ ಹಂತದ ಇಂದ್ರಧನುಷ್ ಅಭಿಯಾನಕ್ಕೆ ಸಚಿವ ಕೆ.ಅಭಯಚಂದ್ರ ಜೈನ್ ಸೋಮವಾರ ಚಾಲನೆ ನೀಡಿದರು. ತಾಲೂಕು ವೈದ್ಯಾಧಿಕಾರಿ ನವೀನ್ ಕುಲಾಲ್ ಪ್ರಾಸ್ತಾ ವಿಕವಾಗಿ ಮಾತನಾಡಿದರು.
ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪಿ.ಕೆ.ಥೋಮಸ್, ಸಿ.ಎಚ್.ಗಫೂರ್, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಶಶಿಕಲಾ, ವೈದ್ಯಾಧಿಕಾರಿ ಜ್ಞಾನೇಶ್ ಕಾಮತ್, ಆರೋಗ್ಯ ಶಿಕ್ಷಣಾಧಿಕಾರಿ ಡಾ.ಸುಶೀಲಾ ಈ ಸಂದರ್ಭ ಉಪಸ್ಥಿತರಿದ್ದರು.
Next Story