ಶರತ್ ಮಡಿವಾಳರ ಮನೆಗೆ ಸಚಿವ ರಮಾನಾಥ ರೈ ಭೇಟಿ
ಮಂಗಳೂರು, ಜು.12: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ಮಡಿವಾಳ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಇಂದು ಬೆಳಗ್ಗೆ ಭೇಟಿ ನೀಡಿದರು.
ಸಜಿಪ ಗ್ರಾಮದಲ್ಲಿರುವ ಶರತ್ ಅವರ ಮನೆಗೆ ಭೇಟಿ ನೀಡಿದ ಸಚಿವರು ಶರತ್ ತಂದೆ ತನಿಯಪ್ಪರಿಗೆ ಸಾಂತ್ವಾನ ಹೇಳಿದರು.
ಮಾಧ್ಯಮದವರನ್ನು ಹೊರಗಿಟ್ಟು ಶರತ್ ಅವರ ಮನೆಗೆ ತೆರಳಿದ ಸಚಿವರು ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವ ಭರವಸೆ ನೀಡಿದ್ದರೆನ್ನಲಾಗಿದೆ.
ಸಚಿವರು ಭೇಟಿ ನೀಡದಿರುವ ಬಗ್ಗೆ ತನಿಯಪ್ಪ ಅವರು ನಿನ್ನೆ ಮಾಧ್ಯಮದೆದುರು ಬೇಸರ ವ್ಯಕ್ತಪಡಿಸಿದ್ದರು.
ಘಟನೆ ನಡೆದ ಒಂಬತ್ತು ದಿನಗಳ ಬಳಿಕ ಸಚಿವರು ಭೇಟಿ ನೀಡಿದ್ದಾರೆ.
Next Story