‘ಅರ್ಜುನ್ ವೆಡ್ಸ್ ಅಮೃತ’ ಸಿನಿಮಾ ಬಿಡುಗಡೆ
ಮಂಗಳೂರು, ಜು.21: ಬೆದ್ರ 9 ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾದ ಪತ್ರಕರ್ತ ರಘು ಶೆಟ್ಟಿ ನಿರ್ದೇಶನದ ‘ಅರ್ಜುನ್ ವೆಡ್ಸ್ ಅಮೃತ’ ಸಿನಿಮಾದ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ನಗರದ ಫಿಝಾ ಮಾಲ್ನಲ್ಲಿರುವ ಪಿಆರ್ ಥಿಯೇಟರ್ನಲ್ಲಿ ಜರಗಿತು.
ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಯರ್ ಕವಿತಾ ಸನಿಲ್ ಸೀಮಿತ ಮಾರುಕಟ್ಟೆಯ ತುಳುಚಿತ್ರರಂಗದಲ್ಲಿ ಈಗ ಹಿಂದಿಗಿಂತಲೂ ಹೆಚ್ಚು ಚಿತ್ರಗಳು ತಯಾರಾಗುತ್ತಿವೆ. ತುಳು ಭಾಷಾಭಿಮಾನದಿಂದ ತಯಾರಾಗುತ್ತಿರುವ ಚಿತ್ರಗಳನ್ನು ವೀಕ್ಷಿಸಿ ಪ್ರೇಕ್ಷಕರು ಪ್ರೋತ್ಸಾಹ ನೀಡಬೇಕು ಎಂದರು.
ಚಿತ್ರದ ನಿರ್ದೇಶಕ ರಘು ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತುಳು ಸಿನಿಮಾರಂಗದ ಹಿರಿಯ ಸಾಧಕರಾದ ಡಾ. ರಿಚರ್ಡ್ ಕ್ಯಾಸ್ಟಲಿನೊ, ಡಾ. ಸಂಜೀವ ದಂಡಕೇರಿ ಹಾಗೂ ರಂಗನಟ, ಸಂಘಟಕ ವಿ.ಜಿ. ಪಾಲ್ರನ್ನು ಗೌರಸಲಾಯಿತು.
ತುಳುಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಟಿ.ಎ. ಶ್ರೀನಿವಾಸ್,ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಜಯಕುಮಾರ್ ಕೊಡಿಯಾಲ್ಬೈಲ್, ಮೇಗಿನ ಮಾಲಾಡಿ ಬಾಲಕೃಷ್ಣ ಶೆಟ್ಟಿ, ವೀರೇಂದ್ರ ಶೆಟ್ಟಿ ಕಾವೂರು, ಪ್ರಕಾಶ್ ಪಾಂಡೇಶ್ವರ್, ನಿರ್ಮಾಪಕರಾದ ಕಿರಣ್ ಬಿ.ಎನ್., ದಿನೇಶ್ ಮಲ್ಯ, ವೆಂಕಟೇಶ್ ಕಾಮತ್,ಅಕ್ಷತಾ ಕಾಮತ್, ನಟ ಅನೂಪ್ ಸಾಗರ್, ನಟಿ ಆರಾಧ್ಯ ಶೆಟ್ಟಿ ಉಪಸ್ಥಿತರಿದ್ದರು. ಆರ್.ಜೆ. ಅನುರಾಗ್ ಕಾರ್ಯಕ್ರಮ ನಿರೂಪಿಸಿದರು.