ಬಂಟ ಕ್ರೀಡೋತ್ಸವದಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ
ಮಂಗಳೂರು, ಆ.21: ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಗರದ ಬಂಟ್ಸ್ಹಾಸ್ಟೆಲ್ನ ಓಂಕಾರನಗರದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಬಂಟ್ಸ್ ಹಾಸ್ಟೆಲ್ನಲ್ಲಿ ಆಯೋಜಿಸಲಾದ ಅಂತರ್ ಜಿಲ್ಲಾ ಬಂಟ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.
ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಬಬಿತಾ ಶೆಟ್ಟಿ ಸುರತ್ಕಲ್, ಭಾಗೀರತಿ ಶೆಟ್ಟಿ, ಕೋಕೋ ಕ್ರೀಡೆಯಲ್ಲಿ ಭವಿಷ್ ಶೆಟ್ಟಿ ಚೇಳಾರ್, ಕರಾಟೆಯಲ್ಲಿ ಸೋಹನ್ ಎಂ.ರೈ, ಈಜು ಸಾಧಕಿ ಸಾನ್ಯ ಡಿ.ಶೆಟ್ಟಿ ಹಾಗೂ ಎನ್ಎಸ್ಎಸ್ನಲ್ಲಿ ರಚನಾ ಶೆಟ್ಟಿ ಅವರ ಸಾಧನೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.
ಹಗ್ಗ ಜಗ್ಗಾಟ ಪಂದ್ಯಾಟದ ಪುರುಷರ ವಿಭಾಗದಲ್ಲಿ ಪುತ್ತೂರು ಬಂಟ್ಸ್ ತಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಎಕ್ಕಾರು ಬಂಟರ ಸಂಘ ಪ್ರಥಮ ಸ್ಥಾನ ಗಳಿಸಿತು.
ಪುರುಷರ ವಿಭಾಗದ ಹಗ್ಗ ಜಗ್ಗಾಟ ಪಂದ್ಯಾಟದಲ್ಲಿ ಮಂಜೇಶ್ವರ ಬಂಟರ ಸಂಘ ದ್ವಿತೀಯ ಹಾಗೂ ಮಂಗಳೂರು ತಾಲೂಕು ಬಂಟರ ಸಂಘ ತೃತೀಯ ಸ್ಥಾನ ಪಡೆದರೆ, ಮಹಿಳೆಯರ ವಿಭಾಗದಲ್ಲಿ ಉಳ್ಳಾಲ ಬಂಟರ ಸಂಘ ದ್ವಿತೀಯ ಹಾಗೂ ಮಂಜೇಶ್ವರ ಬಂಟರ ಸಂಘ ತೃತೀಯ ಸ್ಥಾನ ಪಡೆಯಿತು.
ಪ್ರಶಸ್ತಿ ವಿತರಿಸಿದ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಹಾಗೂ ಸಿದ್ಧಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ವಿಜೇತರನ್ನು ಅಭಿನಂದಿಸಿದರು.
ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಂ.ಸುಂದರ ಶೆಟ್ಟಿ, ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ರವೀಂದ್ರನಾಥ ಶೆಟ್ಟಿ, ರವಿರಾಜ್ ಶೆಟ್ಟಿ, ಡಾ. ಆಶಾಜ್ಯೋತಿ ರೈ, ಜಯರಾಂ ಸಾಂತ, ಉಮೇಶ್ ರೈ, ಜಗನ್ನಾಥ್ ಶೆಟ್ಟಿ ಬಾಳ, ಚಂದ್ರಹಾಸ ರೈ ರಂಗೋಲಿ, ವಿವಿಧ ಬಂಟರ ಸಂಘಗಳ ಪದಾಧಿಕಾರಿಗಳಾದ ಬಾಲಕೃಷ್ಣ ಶೆಟ್ಟಿ ಮೇಗಿನಮಾಲಾಡಿ, ರತ್ನಾಕರ
ಶೆಟ್ಟಿ, ಜಿತೇಂದ್ರ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ರಾಜ್ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ಚೇಳ್ಯಾರುಗುತ್ತು ಕ್ರೀಡಾ ವಿಜೇತರ ಪಟ್ಟಿ ವಾಚಿಸಿದರು. ಜೊತೆ ಕಾರ್ಯದರ್ಶಿ ಸುಕೇಶ್ ಚೌಟ ಕಾರ್ಯಕ್ರಮ ನಿರೂಪಿಸಿದರು. ಬಂಟ ಕ್ರೀಡೋತ್ಸವ ಸಮಿತಿಯ ಸಂಚಾಲಕ ಕಿರಣ್ ಪಕ್ಕಳ ವಂದಿಸಿದರು.