ಉಡುಪಿ: ವಿ.ವಿ. ಮಟ್ಟದ ಟಿಟಿ ಪಂದ್ಯಾಟ ಉದ್ಘಾಟನೆ
ಉಡುಪಿ, ಆ.22: ಮಂಗಳೂರು ವಿ.ವಿ ಕ್ರೀಡಾ ವಿಭಾಗ ಮತ್ತು ಎಂಜಿಎಂ ಕಾಲೇಜಿನ ಕ್ರೀಡಾ ವಿಭಾಗದ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ. ಮಟ್ಟದ ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾಟ ಇಂದು ಬೆಳಗ್ಗೆ ಎಂಜಿಎಂ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.
ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಕಾರ್ಯದರ್ಶಿ ವಾಸಂತಿ ಕೊರಡ್ಕಲ್ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ಬದುಕಿನ ಅವಿಭಾಜ್ಯ ಅಂಗ. ಕ್ರೀಡೆಗೆ ಮನಸ್ಸು ದೇಹ ಎರಡನ್ನು ಆರೋಗ್ಯ ಕರಗೊಳಿಸುವ ಶಕ್ತಿ ಇದೆ ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ್ ಪ್ರೊ. ಕುಸುಮಾ ಕಾಮಾತ್ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿವಿ ಕ್ರೀಡಾ ವಿಭಾಗದ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ, ಎಂಜಿಎಂ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಸುರೇಶ್ ರಮಣ ಮಯ್ಯ, ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜಿನ ಕ್ರೀಡಾ ನಿರ್ದೇಶಕಿ ಜಯಶ್ರೀ ನಾಯಕ್ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸುರೇಂದ್ರನಾಥ್ ಶೆಟ್ಟಿ ವಂದಿಸಿದರು.