ಗಾಂಜಾ ಸಾಗಾಟ: ಆರೋಪಿ ಸೆರೆ
ಮಂಗಳೂರು, ಆ. 22: ಕಾಸರಗೋಡಿನಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರ ಭಂಡಾರ ಮನೆ ನಿವಾಸಿ ಮಹಮ್ಮದ್ ದಾವೂದ್ ಇಬ್ರಾಹಿಂ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 2 ಕೆ. ಜಿ. ಗಾಂಜಾ ವಶ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆಸಿದ್ದು, ಈ ಸಂದರ್ಭ ಮತ್ತೊಬ್ಬ ಆರೋಪಿ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿ ಕಾರ್ಯಚರಣೆಯಲ್ಲಿ ಸಿಸಿಬಿ ಎಸ್ ಐ ಶ್ಯಾಮ್ ಸುಂದರ್, ಎಎಸ್ ಐ ಶಶಿಧರ ಶೆಟ್ಟಿ, ಸಿಬ್ಬಂದಿ ಹರೀಶ್ ಪಾಲ್ಗೊಂಡಿದ್ದರು.
Next Story