ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಕಚೇರಿ ಉದ್ಘಾಟನೆ
ಮಂಗಳೂರು, ಅ.18: ನಗರದ ಮಲ್ಲಿಕಟ್ಟೆಯ ಇಂದಿರಾ ಜನ್ಮ ಶತಾಬ್ಧಿ ಭವನದಲ್ಲಿರುವ ದ.ಕ.ಜಿಲ್ಲಾ ಕಾಂಗ್ರೆಸ್ನ ಇತರ ಹಿಂದುಳಿದ ವರ್ಗಗಳ ವಿಭಾಗದ ನೂತನ ಕಚೇರಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭ ಕೆಪಿಸಿಸಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸದಾಶಿವ ಉಳ್ಳಾಲ್, ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಧರಣೇಂದ್ರ ಕುಮಾರ್, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೋಭಾ ಕೇಶವ, ಬ್ಲಾಕ್ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ಸಾಲ್ಯಾನ್, ಜನಾರ್ದನ್, ಗಣೇಶ ಪೂಜಾರಿ, ಶಂಕರ ಆಚಾರ್ಯ, ಪದ್ಮ ಕುಮಾರ್, ದಿನೇಶ್ ಕುಂಪಲ, ವಿಶ್ವನಾಥ ಕೋಟ್ಯಾನ್, ರವೀಶ್, ತಿಮ್ಮಪ್ಪಕೋಟ್ಯಾನ್, ಶಶಿಕಲಾ, ಮೋಹಿನಿ ಗಟ್ಟಿ, ವಿನೋದ, ಪದ್ಮನಾಭ ಫಣೆಕ್ಕರ್ ಉಪಸ್ಥಿತರಿದ್ದರು.
Next Story