Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಸಾಹಿತ್ಯ ಜಗತ್ತಿನ ಗಮನ...

ಕನ್ನಡ ಸಾಹಿತ್ಯ ಜಗತ್ತಿನ ಗಮನ ಸೆಳೆಯುತ್ತಿದೆ : ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ

ವಾರ್ತಾಭಾರತಿವಾರ್ತಾಭಾರತಿ26 Nov 2017 11:46 PM IST
share

ಮೈಸೂರು,ನ.26: ಹಿಂದೆ ಕೇವಲ ಕನ್ನಡ ಸಾಹಿತ್ಯದ ಸಮಸ್ಯೆಗಳ ಚರ್ಚೆಗೆ ಸೀಮಿತವಾಗಿದ್ದ ಸಮ್ಮೇಳನಗಳು ಕಾಲಕ್ರಮೇಣ ರಾಜಕೀಯ ವ್ಯತ್ಯಯಗಳ ಬಗ್ಗೆ ಕೂಡ ಮಾತನಾಡುವ ಒತ್ತಾಯವನ್ನು ಸೃಷ್ಟಿಮಾಡಿವೆ ಎಂದು ಹಿರಿಯ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅಭಿಪ್ರಾಯಪಟ್ಟರು.

 ಕನ್ನಡ ಭಾಷೆ ರಾಜಕೀಯ ನಾಯಕರಿಗೂ ಸಂಸ್ಕೃತಿಯನ್ನು ಹೇಳಿಕೊಡುತ್ತದೆ. ಹಾಗಾಗಿಯೇ ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ಅವರು ‘ನಾವು ಬೆಂಕಿ ಹಚ್ಚುವವರ ಜೊತೆ ಕೈಜೋಡಿಸಬಾರದು. ದೀಪ ಹಚ್ಚುವವರೊಂದಿಗೆ ಕೈ ಜೋಡಿಸಬೇಕು’ ಎಂದು ಅದ್ಭುತವಾಗಿ ಹೇಳಿದ್ದಾರೆ.

ಕನ್ನಡ ಭಾಷೆ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಸ್ತವ ಮತ್ತು ಆಶಯದ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಹಿಂದೆ ಕುವೆಂಪು ಅವರು ಕವಿತೆ ವಾಚಿಸಿದರೆ ಕಿಕ್ಕಿರಿದು ಜನರು ಸೇರುತ್ತಿದ್ದರು. ಅಂತಹ ಅದ್ಭುತ ಶಕ್ತಿ ಕಾವ್ಯಕ್ಕೆ ಇದೆ. ಇವತ್ತು ಕಾವ್ಯವನ್ನು ಸೂಕ್ಷ್ಮವಾಗಿ ಓದುವವರೇ ಇಲ್ಲದಂತಾಗಿದೆ. ಈ ವಾಸ್ತವ ಮತ್ತು ಆಶಯದ ಬಿಕ್ಕಟ್ಟನ್ನು ದೂರವಾಗಿಸುವ ಚಿಂತನೆ ನಡೆಯಬೇಕು ಎಂದರು.

ನಾನು ಒಮ್ಮೆ ಕಡಲತೀರದ ಭಾರ್ಗವ ಡಾ.ಕೆ.ಶಿವರಾಮ ಕಾರಂತ ಅವರನ್ನು ಭೇಟಿಯಾಗಿದ್ದೆ. ಅಲ್ಲೊಂದು ಹುಡುಗಿ ಕನ್ನಡ ಪದ್ಯವನ್ನು ಬಹಳ ಚೆನ್ನಾಗಿ ಓದುತ್ತಿದ್ದಳು. ಅದನ್ನು ಕಾರಂತರಿಗೂ ಹೇಳಿದೆ. ಅವರು ಆ ಬಾಲಕಿಯನ್ನು ಕರೆದು ನೀನು ಓದುತ್ತಿರುವ ಪುಸ್ತಕ ತೋರಿಸು ಎಂದಾಗ, ಆಕೆ ಅದನ್ನು ನನ್ನತ್ತ ಪ್ರದರ್ಶಿಸಿದಳು. ಅದರಲ್ಲಿ ಕನ್ನಡ ಪದ್ಯವನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗಿತ್ತು ಎಂದು ವಿಷಾದದಿಂದ ಸ್ಮರಿಸಿದರು.

ಆ ಬಾಲಕಿಯ ತಾಯಿ ನನಗೆ ಕನ್ನಡ ಬರುತ್ತದೆ. ನಿಮ್ಮ ಪುಸ್ತಕಗಳನ್ನು ನಾನು ಓದಿ ಹೇಳುತ್ತೇನೆ ಅವಳಿಗೆ ಎಂದಳು. ಅದಕ್ಕೆನಾನು ಮುಂದೆ ನಿನ್ನ ಮೊಮ್ಮಕ್ಕಳಿಗೆ, ನಿನ್ನ ಮಗಳು ಹಾಗೆ ಮಾಡುವುದು ಸಾಧ್ಯವೇ ಎಂದು ಪ್ರಶ್ನಿಸಿದೆ. ಆಕೆ ನಿರುತ್ತರಳಾದಳು ಎಂದು ವೆಂಕಟೇಶಮೂರ್ತಿ ಹೇಳಿದರು.
ಇವತ್ತು ಕನ್ನಡ ಸಾಹಿತ್ಯ ಜಗತ್ತಿನ ಗಮನ ಸೆಳೆಯುತ್ತಿದೆ. ಡೆಗ್ಲೂಜ್ ಎಂಬ ಇಂಗ್ಲಿಷ್ ಕವಿ ಬಸವಣ್ಣನ ವಚನದ ಬಗ್ಗೆ ಮಾತನಾಡುತ್ತಾನೆ. ಆತ ಎ.ಕೆ.ರಾಮಾನುಜಮ್ ಅವರ ಕೃತಿಯನ್ನೂ ಪ್ರಸ್ತಾಪಿಸುತ್ತಾನೆ ಎಂದರೆ ಕನ್ನಡ ಸಾಹಿತ್ಯದ ಶಕ್ತಿಯ ಅರ್ಥವಾಗುತ್ತದೆ ಎಂದರು.
ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವರಾದ ಗೀತಾ ಮಹದೇವ ಪ್ರಸಾದ್, ಎಚ್.ಕೆ.ಪಾಟೀಲ್, ಸಂಸದ ಪ್ರತಾಪ ಸಿಂಹ, ಹಿರಿಯ ಸಾಹಿತಿಗಳಾದ ಡಾ.ಸಿಪಿಕೆ, ಬಿ.ಟಿ.ಲಲಿತಾ ನಾಯಕ್, ಡಾ.ವಸುಂಧರಾ ಭೂಪತಿ, ಜಿಲ್ಲಾಧಿಕಾರಿ ಡಿ.ರಂದೀಪ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X