ದಲಿತ ಮಹಾ ಒಕ್ಕೂಟದಿಂದ ಅಂಬೇಡ್ಕರ್ ಪರಿನಿರ್ವಾಣ ಆಚರಣೆ
ಕೋಲಾರ, ಡಿ. 6: ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟದ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ಆಚರಿಸಲಾಯಿತು. ಕಾರ್ಯಕ್ರಮವನ್ನು ಬಯಲುಯ ಸೀಮೆ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಜಯದೇವ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದಲಿತ ಮಹಾ ಒಕ್ಕೂಟದ ಮುಖಂಡರಾದ ಗಾಂಧೀನಗರದ ನಾರಾಯಣಸ್ವಾಮಿ, ಚೇತನ್ ಬಾಬು, ಹೂಹಳ್ಳಿ ಪ್ರಕಾಶ್, ಹಾರೋಹಳ್ಳಿ ನಾರಾಯಣ ಸ್ವಾಮಿ ಮುಂತಾದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
Next Story