ಪತ್ರಕರ್ತ ರವಿ ಬೆಳಗೆರೆಗೆ ಜೈಲು
ಬೆಂಗಳೂರು, ಡಿ.11: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರವಿ ಬೆಳಗೆರೆ ಅವರನ್ನು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಇಂದು ಹಾಜರುಪಡಿಸಿದಾಗ ನ್ಯಾಯಾಧೀಶ ಜಗದೀಶ್ ಅವರು ರವಿಬೆಳಗೆರೆಗೆ ಡಿ.23 ರ ತನಕ ನ್ಯಾಯಾಂಗ ಬಂಧನ ವಿಧಿಸಿದರು ಎಂದು ತಿಳಿದು ಬಂದಿದೆ.
ಇಂದು ರವಿ ಬೆಳಗೆರೆ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿಲ್ಲ. ಆದರೆ ರವಿ ಬೆಳಗೆರೆ ಆರೋಗ್ಯಕ್ಕೆ ಸಂಬಂಧಿಸಿ 60 ಪುಟಗಳ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ರವಿ ಬೆಳಗೆರೆ ಅವರಿಗೆ ಹೃದಯ ಸಂಬಂಧಿ ಕಾಯಿಲೆಯ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆಗೆ ವಿಶೇಷ ವ್ಯವಸ್ಥೆ ಮಾಡುವಂತೆ ಇದೇ ಸಂದರ್ಭದಲ್ಲಿ ವಕೀಲರಾದ ದಿವಾಕರ್ ನ್ಯಾಯಾಧೀಶರಿಗೆ ಮನವಿ ಮಾಡಿದರು.
ರವಿ ಬೆಳಗೆರೆಗೆ ಜಾಮೀನು ಕೋರಿ ವಕೀಲರ ತಂಡ ಬುಧವಾರ ನ್ಯಾಯಾಲಯಕ್ಕೆಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ.
Next Story