"ಲವ್ಜಿಹಾದ್ ಹೆಸರಿನಲ್ಲಿ ಅಮಾಯಕ ಮುಸ್ಲಿಮರ ಹತ್ಯೆ"
ರಾಜ್ಯ ಮುಸ್ಲಿಂ ಹಿತರಕ್ಷಣಾ ವೇದಿಕೆಯಿಂದ ಧರಣಿ; ರಾಷ್ಟ್ರಪತಿಗೆ ಮನವಿ
ಚಿತ್ರದುರ್ಗ, ಡಿ.12: ಲವ್ ಜಿಹಾದ್ನ ಹೆಸರಿನಲ್ಲಿ ಅಮಾಯಕ ಮಸ್ಲಿಮರನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮುಸ್ಲಿಂ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಧರಣಿನಿರತರು, ತಪ್ಪಿತಸ್ಥರನ್ನು ಬಂಧಿಸಿ ನೊಂದ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಮುಸ್ಲಿಂ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಂ. ಹನೀಫ್ ಧರಣಿಯನ್ನುದ್ದೇಶಿಸಿ ಮಾತನಾಡಿ, ರಾಜಸ್ಥಾನದ ರಾಜಮಂಡ್ ಜಿಲ್ಲೆಯಲ್ಲಿ ಶಂಭುನಾಥ್ ರಾಯಗರ್ ಎಂಬ ವ್ಯಕ್ತಿ ಅಫ್ರೋಝುಲ್ ಇಸ್ಲಾಂನ ಮೇಳೆ ಪೆಟ್ರೋಲ್ ಸುರಿದು ಜೀವಂತವಾಗಿ ದಹಿಸಿದ್ದಲ್ಲದೆ, ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿರುವುದು ನಾಗರಿಕ ಸಮಾಜ ಬೆಚ್ಚಿ ಬೀಳುವಂತಾಗಿದೆ. ಇಂತಹ ಅಮಾನವೀಯ ಕೃತ್ಯಗಳು ನಿಲ್ಲಬೇಕು. ಅಲ್ಲಿನ ಸರಕಾರ ಆರೋಪಿಯ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂವಿಧಾನದಡಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆದರೆ, ಲವ್ ಜಿಹಾದ್ನ ಹೆಸರಿನಲ್ಲಿ ಮುಗ್ಧ ಮುಸ್ಲಿಮರನ್ನು ಹತ್ಯೆ ಮಾಡುತ್ತಿರುವುದು ಯಾವ ನ್ಯಾಯ. ಱಸಬ್ ಕಾ ಸಾತ್ ಸಬ್ ಕ ವಿಕಾಸ್ೞಎಂದು ಹೇಳಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿರವರಿಗೆ ಇವುಗಳೆಲ್ಲಾ ಕಣ್ಣಿಗೆ ಕಾಣಿಸುವುದಿಲ್ಲವೇಕೆ ಎಂದು ಪ್ರಶ್ನಿಸಿದ ಎಂ.ಹನೀಫ್, ಶಂಭುನಾಥ್ ರಾಯಗರ್ಗೆ ಗಲ್ಲು ಶಿಕ್ಷೆ ವಿಧಿಸುವ ಜೊತೆಗೆ ಕೃತ್ಯದ ಹಿಂದಿ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಕರ್ನಾಟಕ ರಾಜ್ಯ ಮುಸ್ಲಿಂ ಹಿತರಕ್ಷಣಾ ವೇದಿಕೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮುನಿರಾ ಎ.ಮಕಾಂದಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮುದಸ್ಸಿರ್ ನವಾಝ್, ಗೌರವಾಧ್ಯಕ್ಷ ಸೈಯದ್ ಇಸ್ಹಾಕ್, ಜಿಲ್ಲಾಧ್ಯಕ್ಷ ಶೌಕತ್ ಬಾಷ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಜ್ಮತಾಜ್, ಟಿಪ್ಪುಸುಲ್ತಾನ್ ಅಭಿಮಾನಿ ಮಹಾವೇದಿಕೆಯ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಅಲಿ. ಮುಜಾಹಿದ್, ಮೆಹಬೂಬ್ ಖಾನ್, ಶಬಾನಾ ಖಾನ್, ಫಾರೂಕ್, ಶಫೀವುಲ್ಲಾ, ಹೈದರಾಲಿ ಖಾನ್, ಯೂಸೂಫ್ ಖಾನ್ ಮುಂತಾದವರು ಭಾಗವಹಿಸಿದ್ದರು.