ಬಸ್ಸಿನ ಚಕ್ರಕ್ಕೆ ಸಿಲುಕಿ ಮಗು ಮೃತ್ಯು
ಚಿಕ್ಕಮಗಳೂರು, ಡಿ.13: ಖಾಸಗಿ ಬಸ್ಸೊಂದರ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿರುವ ಘಟನೆ ತರೀಕೆರೆ ಬಳಿಯ ಕುಂದನಹಳ್ಳಿ ಎಂಬಲ್ಲಿ ನಡೆದಿದೆ.
ಮೃತ ಮಗುವನ್ನು ರಚನಾ(2) ಎಂದು ಗುರುತಿಸಲಾಗಿದೆ. ಮಗುವನ್ನು ತಾಯಿಯು ಅಂಗನವಾಡಿಗೆ ಕರೆದೊಯ್ಯುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ಸಿನ ಚಕ್ರದಡಿಗೆ ಮಗು ಬಿದ್ದಿದೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.
ಘಟನೆ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story