ನಿಖಿಲ್ ರಾಜಕೀಯ ಪ್ರವೇಶ ಇಲ್ಲ: ಕುಮಾರಸ್ವಾಮಿ
ಬೆಂಗಳೂರು, ಡಿ. 16: ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ರಾಜಕೀಯ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಶನಿವಾರ ಇಲ್ಲಿನ ಜೆ.ಪಿ.ಭವನದಲ್ಲಿ ತಮ್ಮ ಹುಟ್ಟುಹಬ್ಬ ಆಚರಣೆ ವೇಳೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಿಖಿಲ್ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಆದರೆ, ಪಕ್ಷದ ಪ್ರಚಾರದಲ್ಲಿ ಭಾಗವಹಿಸಲಿದ್ದಾನೆಂದು ಹೇಳುವ ಮೂಲಕ ನಿಖಿಲ್ ರಾಜಕೀಯ ಪ್ರವೇಶದ ಬಗೆಗಿನ ಗೊಂದಲಗಳಿಗೆ ತೆರೆ ಎಳೆದರು.
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೇ ಜೆಡಿಎಸ್ ಶಕ್ತಿ. ಈಗಾಗಲೇ ಪಕ್ಷ ಸಂಘಟನೆಗೆ ಚಾಲನೆ ನೀಡಿದ್ದು, ಪಕ್ಷವನ್ನು ಅಧಿಕಾರಕ್ಕೆ ತರುವ ವರೆಗೂ ವಿಶ್ರಾಂತಿಯ ಪ್ರಶ್ನೆಯೇ ಇಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜೀವನವನ್ನು ಮುಡಿಪಾಗಿ ಇಡುತ್ತೇನೆ ಎಂದು ಕುಮಾರಸ್ವಾಮಿ ಘೋಷಿಸಿದರು.
Next Story