ಮೈಸೂರು: ಬೈಕ್ನಲ್ಲಿ ಬಂದು ಮಹಿಳೆಯ ಸರ ಅಪಹರಣ
ಮೈಸೂರು,ಫೆ.20: ಸರಸ್ವತಿಪುರಂನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ನಿಂದ ವಾಪಸ್ಸಾಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಸರಸ್ವತಿಪುರಂ ನಿವಾಸಿ ಶ್ರೀನಿವಾಸ್ ಎಂಬವರ ಪತ್ನಿ ಪ್ರೇಮಾ (65)ಎಂಬವರು ಸರಸ್ವತಿಪುರಂ 5ನೇ ಮೇನ್ 5ನೇ ಕ್ರಾಸ್ ನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಗೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಅವರ ಕತ್ತಿನಲ್ಲಿದ್ದ 65ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಈ ಕುರಿತು ಸರಸ್ವತಿಪುರಂ ಠಾಣೆಗೆ ಮಾಹಿತಿ ನೀಡಲಾಗಿ ಇನ್ಸ್ ಪೆಕ್ಟರ್ ನಾಗೇಗೌಡ ಎಸಿಪಿ ಧರ್ಮಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story