ಮೈಸೂರು: ವಿಧಾಸಭಾ ಚುನಾವಣೆ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ
ಮೈಸೂರು,ಫೆ.26: ಮುಂಭಾರುವ ಸಾರ್ವತ್ರಿಕಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ನಗರದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಿ.ರಂದೀಪ್ ಚಾಲನೆ ನೀಡಿದರು. ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಮತ್ತು ಉಪ ಚುನಾವಣಾಧಿಕಾರಿಗಳಿಗೆ ಚುನಾವಣೆ ಪೂರ್ವ ಸಿದ್ಧತೆ ಮತ್ತು ಚುನಾವಣೆ ಸಂದರ್ಭದಲ್ಲಿ ಕೈಗೊಳ್ಳ ಬೇಕಾದ ಕಾರ್ಯಗಳ ಕುರಿತು ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಗೋವಾ ಚುನಾವಣಾಧಿಕಾರಿ ಇಮಾನ್ಸೂ ಮಾರೆಕ್, ಎಸ್.ನಾರಾಯಣ್, ರೂಹಿ ಖಾನ್, ಎಸ್.ಎಸ್.ಬಿರಾದಾರ್, ಭಾಗ್ಯಲಕ್ಷ್ಮೀ, ಲೋಕನಾಥ್ ಇತರರು ಭಾಗಿಯಾಗಿದ್ದರು.
Next Story