Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತ ಕವಲು ದಾರಿಯಲ್ಲಿ ಸಾಗುತ್ತಿದೆ:...

ಭಾರತ ಕವಲು ದಾರಿಯಲ್ಲಿ ಸಾಗುತ್ತಿದೆ: ಸಾಹಿತಿ ಕೆ.ಮರುಳಸಿದ್ದಪ್ಪ

ವಾರ್ತಾಭಾರತಿವಾರ್ತಾಭಾರತಿ11 March 2018 10:25 PM IST
share
ಭಾರತ ಕವಲು ದಾರಿಯಲ್ಲಿ ಸಾಗುತ್ತಿದೆ: ಸಾಹಿತಿ ಕೆ.ಮರುಳಸಿದ್ದಪ್ಪ

ತುಮಕೂರು,ಮಾ.11: ಭಾರತ ದೇಶ ಕವಲುದಾರಿಯಲ್ಲಿ ಸಾಗುತ್ತಿದೆ ಎಂದು ಕುವೆಂಪು ಭಾಷಾ ಭಾರತಿ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. 

ತುಮಕೂರಿನ ಕನ್ನಡ ಭವನದಲ್ಲಿ ವೀಚಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಭಾರತದಲ್ಲಿ ಮತ್ತು ವಿಶ್ವದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಗಾಬರಿ ಹುಟ್ಟಿಸುತ್ತದೆ. ಇನ್ನೈದು ವರ್ಷಗಳಲ್ಲಿ ಊಹಿಸಲು ಸಾಧ್ಯವಾಗದಂತಹ ಪರಿಸ್ಥಿತಿಗೆ ತಲುಪುತ್ತದೆ. ಇಂತಹ ಸಂದರ್ಭದಲ್ಲಿ ಕವಿಗಳು, ಕಲಾವಿದರು, ಲೇಖಕರು ಮತ್ತು ಪತ್ರಕರ್ತರು ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವಿದೆ ಎಂದರು.

ಕವಿ ವೀಚಿ ಅವರಲ್ಲಿ ತುಮಕೂರು ಜಿಲ್ಲೆಯ ಸಾಂಸ್ಕೃತಿಕ ವ್ಯಕ್ತಿತ್ವ ಕಂಡು ಬರುತ್ತದೆ. ಅವರು ಕಾವ್ಯವನ್ನು ಗಂಭೀರವಾಗಿ ಪರಿಗಣಿಸಿದರು. ವೀಚಿ ಅವರ ಕಾವ್ಯವು ಸೇರಿದಂತೆ ಯಾವುದೇ ಕಾವ್ಯ ಒಂದು ಒಂದಲ್ಲ, ಹಲವರ ದ್ವನಿ. ಕೆಲವು ಲೇಖಕರು ಅಬ್ಬರದಿಂದ ಮಾತನಾಡಿದರೆ ಮತ್ತೆ ಆಶಾದೇವಿ, ಸುಗತ ಶ್ರೀನಿವಾಸರಾಜು ಅವರಂಥವರು ಮೆಲುದನಿಯಲ್ಲಿ ಬರೆಯುತ್ತಿದ್ದಾರೆ. ಇಂತಹ ಸಮತೋಲನ ಅಗತ್ಯ ಎಂದು ತಿಳಿಸಿದರು.

ಸಂಸ್ಕೃತಿ ಚಿಂತಕ ಡಾ.ಅಮರೇಶ್ ನುಗಡೋಣಿ ಮಾತನಾಡಿ, ಯಾವುದೇ ಸಾಂಸ್ಕೃತಿಕ ಚಳವಳಿಗಳಿಲ್ಲದ ಕಾಲದಲ್ಲಿ ಸ್ತ್ರೀವಾದಿ ಚಳವಳಿ ಆರಂಭವಾಯಿತು. ಅದು ಇಂದು ಅಗಾಧವಾಗಿ ಬೆಳೆದಿದೆ. ಇಂದು ಮಾರ್ಕ್ಸ್ ವಾದ, ಸಮತಾವಾದ, ಅಂಬೇಡ್ಕರ್ ವಾದ ಮಸುಕಾದಂತೆ ಮಹಿಳಾ ವಾದವೂ ಮಸುಕಾಗಬಹುದು. ಆಶಾದೇವಿ ಹಲವು ಗ್ರಂಥಗಳ ಮಹಿಳಾ ಪಾತ್ರಗಳನ್ನು ಮಹಿಳೆಯರನ್ನಾಗಿಯೇ ನೋಡಿದ್ದಾರೆ. ನಾರೀಕೇಳಾದಲ್ಲಿ ಅಂತಹ ಧ್ವನಿ ಇರುವುದು ಕಂಡುಬರುತ್ತದೆ ಎಂದರು.

ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರ ಕಿತ್ತಳೆ, ನೇರಳೆ ಮತ್ತು ಪೇರಳೆ ಕೃತಿಯ ಹೆಸರೇ ಒಂದೊಂದು ವಿಭಿನ್ನ ರುಚಿಯನ್ನು ತೋರಿಸುತ್ತದೆ. ಸುಗತ ಅವರು ಸಮಸ್ಯೆಗಳನ್ನು ಅವಾಹಿಸಿಕೊಂಡು ಪ್ರತಿಯೊಂದು ಮಗ್ಗುಲನ್ನು ವಿಮರ್ಶಿಸಿ ಒಂದು ತೀರ್ಮಾನಕ್ಕೆ ಬರುತ್ತಾರೆ. ಈ ಕೃತಿಯನ್ನು ರಾಜಕಾಣಿಗಳು, ಸಾಹಿತಿಗಳು ಮತ್ತು ಪತ್ರಕರ್ತರು ಓದಲೇಬೇಕು. ಮಾಧ್ಯಮಗಳು ಹುಟ್ಟುಹಾಕುತ್ತಿರುವ ಸಂಗತಿಗಳ ಕುರಿತು ಇದರಲ್ಲಿ ಹೇಳಿದ್ದಾರೆ ಎಂದು ವಿವರಿಸಿದರು.

ವೀಚಿ ಪ್ರಶಸ್ತಿ ಪುರಸ್ಕೃತ ಸುಗತ ಶ್ರೀನಿವಾಸರಾಜು ಮಾತನಾಡಿ, ಸರಕಾರಿ ಪ್ರಶಸ್ತಿ ಸ್ವೀಕರಿಸಲು ಭಯವಾಗುತ್ತದೆ. ಔಟ್‍ಲುಕ್ ಪತ್ರಿಕೆಯ ಸಂಪಾದಕರಾಗಿದ್ದ ವಿನೋದ್ ಮೆಹ್ತ ನನಗೆ ಆಗಾಗ ಎಚ್ಚರಿಸುತ್ತಲೇ ಇದ್ದರು. ಯಾವುದೇ ಕಾರಣಕ್ಕೂ ಪತ್ರಕರ್ತ ಪ್ರಶಸ್ತಿಗಳ ಬೆನ್ನತ್ತಬಾರದು. ಪ್ರಶಸ್ತಿ ಸ್ವೀಕರಿಸುತ್ತಾ ಹೋದಂತೆ ಆತ ಎಲ್ಲರೊಂದಿಗೂ ಹೊಂದಾಣಿಕೆಯಾಗುತ್ತಾನೆ. ಆ ಕಾರಣಕ್ಕಾಗಿ ನಾನು ಹಲವು ಪ್ರಶಸ್ತಿಗಳನ್ನು ನಯವಾಗಿಯೇ ತಿರಸ್ಕರಿಸಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟನೆಗೂ ಮೊದಲು ನಾರೀಕೇಳಾ ಕೃತಿಯ ಲೇಖಕಿ ಡಾ.ಎಂ.ಎಸ್. ಆಶಾದೇವಿ, ಕಿತ್ತಳೆ, ನೇರಳೆ ಪೇರಳೆ ಕೃತಿಯ ಕರ್ತೃ ಸುಗತ ಶ್ರೀನಿವಾಸರಾಜು ಅವರಿಗೆ ವೀಚಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಸಬಾರಿಗೆ ಪಾದ ಕೃತಿಯ ಲೇಖಕ ಬಸವರಾಜ ಹೃತ್ಸಾಕ್ಷಿ ಅವರಿಗೆ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಮತ್ತು ಜಾನಪದ ಕಲಾವಿದೆ ವಡ್ಡಗೆರೆ ಕದಿರಮ್ಮ ಅವರಿಗೆ ವೀಚಿ ಜಾನಪದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಾನಾಗಭೂಷಣ ಬಗ್ಗನಡು, ವೀಚಿ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಎಂ.ಬಸವಯ್ಯ,ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X