ಮುಂಡಗೋಡ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಮುಂಡಗೋಡ,ಮಾ.13: ಸಾಲಭಾದೆ ತಾಳಲಾರದೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ತಾಲೂಕಿನ ಚಿಗಳ್ಳಿ ಪಂಚಾಯತ್ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವನನ್ನು ಪುಂಡಲಿಕ್ ಹನಮಂತಪ್ಪ ಹಾನಗಲ್(35) ಎಂದು ತಿಳಿದುಬಂದಿದೆ.
ಮೃತನು ತಡರಾತ್ರಿ ಮನೆಯಲ್ಲಿಯೇ ನೇಣು ಬೀಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಈತನು ಖಾಸಗಿಯಾಗಿ ಜನರಿಂದ ಸಾಲಪಡೆದಿದ್ದ ಎನ್ನಲಾಗಿದ್ದು, ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಈ ಕುರಿತು ಮುಂಡಗೋಡ ಪೊಲೀಸ ಠಾಣೆ ಪ್ರಕರಣ ದಾಖಲಾಗಿದೆ.
Next Story