ರಂಗಕರ್ಮಿ ಪ್ರಸನ್ನಗೆ ಜೀವಮಾನ ಸಾಧನೆ ಪ್ರಶಸ್ತಿ
ಬೆಂಗಳೂರು, ಮಾ.21: ಕರ್ನಾಟಕ ನಾಟಕ ಅಕಾಡೆಮಿ ವಿಶ್ವರಂಗಭೂಮಿ ದಿನದ ಪ್ರಯುಕ್ತ ಮಾ.27ರಂದು ನಗರದ ನಯನ ಸಭಾಂಗಣದಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಹಿರಿಯ ರಂಗಭೂಮಿ ಹಾಗೂ ಸಿನೆಮಾ ನಿರ್ದೇಶಕ ಎಂ.ಎಸ್.ಸತ್ಯು ಪ್ರಸನ್ನರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ವೇಳೆ ನಾಟಕ ಅಕಾಡೆಮಿ ಆಯೋಜಿಸಿದ್ದ ನಾಟಕ ರಚನಾ ಸ್ಪರ್ಧೆಯ ಯೋಜನೆಯಲ್ಲಿ ಭಾಗವಹಿಸಿ ವಿಜೇತರಾದ ಐವರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story