ಮಂಡ್ಯ: ಎ.23 ರಂದು 5 ರೂ.ಡಾಕ್ಟರ್ ಖ್ಯಾತಿಯ ಶಂಕರೇಗೌಡ ನಾಮಪತ್ರ ಸಲ್ಲಿಕೆ
ಮಂಡ್ಯ, ಎ.21: 5 ರೂಪಾಯಿ ಡಾಕ್ಟರ್ ಖ್ಯಾತಿಯ ಡಾ.ಶಂಕರೇಗೌಡ, ಆ ಪಕ್ಷ, ಈ ಪಕ್ಷ ಸೇರುತ್ತಾರೆಂಬ ಗಾಳಿ ಸುದ್ದಿಗೆ ತೆರೆಬಿದ್ದಿದ್ದು, ಎ.23 ರಂದು ಪಕ್ಷೇತರವಾಗಿ ಕಣಕ್ಕಿಳಿಯಲು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.
ಈಗಾಗಲೇ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ವೈದ್ಯ ಸೇವೆಯ ಜತೆಗೆ ಹಲವಾರು ಹಳ್ಳಿಗಳಿಗೆ ಭೇಟಿ ನೀಡಿ ಮತದಾರರ ಆಶೀರ್ವಾದ ಕೇಳಿರುವ ಶಂಕರೇಗೌಡರು, ಚುನಾವಣೆಗೆ ಸ್ಪರ್ಧಿಸುವುದು ಖಚಿತವಾದಂತಾಗಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ಬಂದೀಗೌಡ ಬಡಾವಣೆಯ ತನ್ನ ನಿವಾಸದಿಂದ ಮೆರವಣಿಗೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿನ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದು ಶಂಕರೇಗೌಡರ ಅಭಿಮಾನಿಗಳು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
Next Story