ಕರ್ತವ್ಯಕ್ಕೆ ಹಾಜರಾದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ
ಬೆಂಗಳೂರು, ಎ.23: ತೇಜರಾಜ್ ಶರ್ಮಾ ಎಂಬಾತನಿಂದ ಮಾ.7ರಂದು ಚಾಕು ಇರಿತಕ್ಕೊಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು ಇದೀಗ ಚೇತರಿಸಿಕೊಂಡು ಸೋಮವಾರ ಕರ್ತವ್ಯಕ್ಕೆ ಹಾಜರಾದರು.
47 ದಿನಗಳ ವಿಶ್ರಾಂತಿಯ ಬಳಿಕ ವಿಶ್ವನಾಥ್ ಶೆಟ್ಟಿ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿ ತಮ್ಮ ದೈನಂದಿನ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ವಿಶ್ವನಾಥ್ ಶೆಟ್ಟಿ ಅವರು ಮಲ್ಯ ಆಸ್ಪತ್ರೆಯಲ್ಲಿ 10 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.
Next Story