ವರುಣಾದಿಂದ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ ಇಲ್ಲ: ಕಾರ್ಯಕರ್ತರಿಂದ ಆಕ್ರೋಶ
ಮೈಸೂರು, ಎ.23: ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬದಲಾಗಿರುವ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಕಾರ್ಯಕರ್ತರು ಕುರ್ಚಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವರದಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತನ್ನ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸುವುದಿಲ್ಲವೆಂದು ಸಮಾವೇಶದಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೆ ಬಿಜೆಪಿ ಕಾರ್ಯಕರ್ತರು ರೊಚ್ಚಿಗೆದ್ದು ಆಕ್ರೋಶ ವ್ಯಕ್ತಪಡಿಸಿದರು.
ವಿಜಯೇಂದ್ರ ಮತ್ತು ಯಡಿಯೂರಪ್ಪ ಅಲ್ಲಿಂದ ಹೊರಡುತ್ತಿದ್ದಂತೆ ಕಾರ್ಯಕರ್ತರು ಮುತ್ತಿಗೆ ಹಾಕಿದರು. ನಾಮಪತ್ರ ಸಲ್ಲಿಸಿಯೇ ಮೈಸೂರಿನಿಂದ ತೆರಳುವಂತೆ ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಆಗ್ರಹಿಸಿದರು. ಬಿಜೆಪಿ ಕಾರ್ಯಕರ್ತರು ಬಿಜೆಪಿ ವರಿಷ್ಠರ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಗುಂಪೊಂದು ಕುರ್ಚಿಗಳನ್ನು ಪುಡಿ ಪುಡಿ ಮಾಡಿ ದಾಂದಲೆ ನಡೆಸಿದಾಗ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದರು ಎಂದು ತಿಳಿದು ಬಂದಿದೆ.
Next Story