ಕಾರಜೋಳರನ್ನು ಸಿಎಂ ಅಭ್ಯರ್ಥಿಯೆಂದು ಘೋಷಿಸಿ: ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು
ಚಿತ್ರದುರ್ಗ, ಮೇ 3: ‘ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೂ, ರಾಷ್ಟ್ರೀಯ ಮಟ್ಟದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಅವರಿಗೆ ಸಿಕ್ಕಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ.
ಗುರುವಾರ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ತಾಕತ್ತು ಇದ್ದರೆ ಮೊದಲು ಬಿಜೆಪಿಯ ಹಿರಿಯ ದಲಿತ ಮುಖಂಡ ಗೋವಿಂದ ಕಾರಜೋಳ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲಿ ಎಂದು ಸವಾಲು ಹಾಕಿದರು.
ರಾಜ್ಯ ಸರಕಾರದ ವಿರುದ್ಧ ‘ಸಿದ್ದ ರೂಪಯ್ಯ’ ಸರಕಾರ ಎಂದು ಟೀಕಿಸಿರುವುದು ಆಧಾರ ರಹಿತ. ನರೇಂದ್ರ ಮೋದಿಯವರು ಪ್ರಧಾನಿ ಸ್ಥಾನದ ಘನತೆ ಮರೆತು, ಸುಳ್ಳು ಆರೋಪ ಮಾಡಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಇದೇ ವೇಳೆ ಆಕ್ಷೇಪಿಸಿದರು.
Next Story