ನಿಂತಿದ್ದ ಲಾರಿಗೆ ಕಾರು ಢಿಕ್ಕಿ:ಮಹಿಳೆ ಮೃತ್ಯು
ಒಂದೇ ಕುಟುಂಬದ 5 ಮಂದಿಗೆ ಗಾಯ
ಮದ್ದೂರು, ಮೇ 25: ಪಟ್ಟಣದ ಎಳನೀರು ಮಾರುಕಟ್ಟೆ ಎದುರಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆ ನಿಯಮ ಪಾಲಿಸದೆ ನಿಲ್ಲಿಸಿದ್ದ ಸಿಮೆಂಟ್ ತುಂಬಿದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಾವನ್ನಪ್ಪಿ ಕುಟುಂಬದ 5 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಘಟನೆಯಲ್ಲಿ ತಿರುಪತಿ ಮೂಲದ ಚಂದ್ರಹಾಸ್ ಅವರ ಪತ್ನಿ ದೀಪಾ(32) ಸಾವನ್ನಪ್ಪಿದ್ದು, ಕಾರು ಚಾಲನೆ ಮಾಡುತ್ತಿದ್ದ ಚಂದ್ರಹಾಸ್, ಅತ್ತೆ ಜಯಲಕ್ಷ್ಮಿ ಮಗ ಕನಿಷ್ಕ ತೀವ್ರವಾಗಿ ಗಾಯಗೊಂಡಿದ್ದಾರೆ. ಚಂದ್ರಹಾಸ್ ಅವರ ಮಕ್ಕಳಾದ ಯಶವಂತ್, ಉಷೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ತೀವ್ರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಲಾರಿಯನ್ನು ವಶಕ್ಕೆ ಪಡೆದಿರುವ ಪಟ್ಟಣದ ಸಂಚಾರ ಪೊಲೀಸರು ಪ್ರಕರಣ ದಾಖಲಸಿಕೊಂಡಿದ್ದಾರೆ.
Next Story