ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪ ಮಕ್ಕಳು ಸಂಚು: ಬಿಎಸ್ ವೈ
ಮೈಸೂರು,ಜೂ.6: ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪಮಕ್ಕಳು ಸಂಚು ಹೂಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಮುಗಿಸಲು ಸಂಚು ರೂಪಿಸಿದ್ದಾರೆ. ಇವರ ಸಂಚಿಗೆ ಕಾಂಗ್ರೆಸ್ ಬಲಿಯಾಗುತ್ತದೆ ಎಂದು ಹೆಸರು ಹೇಳದೆ ಜಾ.ದಳ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಕುಮಾರಸ್ವಾಮಿ ಬಜೆಟ್ ಮಂಡಿಸುವುದನ್ನು ನೋಡಬೇಕು. ಒಂದೆರಡು ತಿಂಗಳು ಕಾದು ನೋಡೋಣ. ಜಯನಗರ ಹಾಗೂ ವಿಧಾನಪರಿಷತ್ನಲ್ಲೂ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಅವರೇನಾದರೂ ಮಾಡಲಿ ನಮ್ಮ ಪ್ರಯತ್ನ ನಿಲ್ಲೋದಿಲ್ಲ ಎಂದು ಹೇಳಿದರು. ಈ ವೇಳೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Next Story