ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಶನಿವಾರ ಈದುಲ್ ಫಿತ್ರ್ ಆಚರಣೆ
ಬೆಂಗಳೂರು, ಜೂ.14: ರಾಜ್ಯದ ಕರಾವಳಿ ಭಾಗ ಹೊರತುಪಡಿಸಿ ಇನ್ನುಳಿದೆಡೆ ಶನಿವಾರ ಈದುಲ್ ಫಿತ್ರ್ ಆಚರಣೆ ಮಾಡಲಾಗುವುದು ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನ ಸಗೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಗುರುವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ನ ಕೇಂದ್ರ ಕಚೇರಿಯಲ್ಲಿ ನಡೆದ ಚಂದ್ರ ದರ್ಶನ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ ಯಾವುದೇ ಭಾಗದಲ್ಲಿ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಶನಿವಾರ ರಮಝಾನ್ ಹಬ್ಬವನ್ನು ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಆದರೆ ಕೇರಳದ ಕ್ಯಾಲಿಕಟ್ ನಲ್ಲಿ ಚಂದ್ರದರ್ಶನವಾದ ಬಗ್ಗೆ ಖಚಿತಪಡಿಸಿರುವ ಖಾಝಿಗಳು ಕರಾವಳಿ ಭಾಗದಲ್ಲಿ ಶುಕ್ರವಾರ ಈದುಲ್ ಫಿತ್ರ್ ಆಚರಿಸಲು ಕರೆ ನೀಡಿದ್ದಾರೆ.
Next Story