ಕೆ.ಆರ್.ಪೇಟೆ: ಪತ್ನಿ ಹಂತಕನಿಗೆ ಜೀವಾವಧಿ ಶಿಕ್ಷೆ
ಕೆ.ಆರ್.ಪೇಟೆ,ಜೂ.14: ತನ್ನ ಪತ್ನಿಯ ಸಾವಿಗೆ ಕಾರಣನಾದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಮಂಡ್ಯ ದ ಕೆ.ಆರ್.ಪೇಟೆ ತಾಲೂಕಿನ ಮಡುವಿನಕೋಡಿ ಗ್ರಾಮದ ಸತೀಶ(40) ಶಿಕ್ಷೆಗೆ ಗುರಿಯಾದ ಅಪರಾಧಿ.
ಕಳೆದ ಎರಡು ವರ್ಷಗಳ ಹಿಂದೆ ಮಧ್ಯಸೇವನೆಗೆ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ತನ್ನ ಪತ್ನಿ ರೇಣುಕಾ ಅವರೊಂದಿಗೆ ಜಗಳ ತೆಗೆದು ಆಕೆಯ ಮೈಮೇಲೆ ಸೀಮೆಎಣ್ಣೆ ಸುರಿದು ಹತ್ಯೆ ಮಾಡಿದ್ದು, ಪ್ರಕರಣ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಾದ- ವಿವಾದ ಆಲಿಸಿದ ಮಂಡ್ಯದ 3 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಳಸಪ್ಪ ನಾಯಕ್ ಅವರು ಆರೋಪಿ ಸತೀಶನು ತಪ್ಪತಸ್ಥನೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
Next Story