ಹೊಸ ಬಜೆಟ್ ಮಂಡನೆ ಅನಿವಾರ್ಯ: ಕುಮಾರಸ್ವಾಮಿ
ಬೆಂಗಳೂರು, ಜೂ. 29: ರಾಜ್ಯದ ರೈತರಿಗೆ ನೀಡಿದ ಭರವಸೆಯನ್ನು ಈಡೇರಿಸಲು ಹೊಸ ಬಜೆಟ್ ಮಂಡನೆ ಮಾಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೊಸ ಬಜೆಟ್ನಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿರುವುದಿಲ್ಲ. ಅಲ್ಲದೆ, ಹಳೆಯ ಯೋಜನೆಗಳನ್ನು ಮುಂದುವರಿಸುವುದರ ಜೊತೆಗೆ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಲಾಗುವುದು ಎಂದರು.
ಹಿಂದಿನ ಸರಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದಿಲ್ಲ. ಅವುಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದು, ರೈತರಿಗೆ ನೀಡಿದ್ದ ಸಾಲಮನ್ನಾ ಮಾಡುವ ಭರವಸೆ ಈಡೇರಿಸಲು ಬದ್ಧ. ಈ ಬಗ್ಗೆ ಆಯವ್ಯಯದಲ್ಲಿ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
Next Story