ಸೊರಬ: ಮರಕ್ಕೆ ಕಾರು ಢಿಕ್ಕಿ; ಚಾಲಕ ಸ್ಥಳದಲ್ಲೇ ಮೃತ್ಯು
ಸೊರಬ,ಜು.02: ಸಾಗರದಿಂದ ಸೊರಬಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಳಲಗದ್ದೆ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಸೊರಬ ಪಿಎಲ್ಡಿ ಬ್ಯಾಂಕ್ನ ಉಪಾಧ್ಯಕ್ಷರಾಗಿದ್ದ ಚಾಮರಾಜ್ರವರು ಸಾಗರಕ್ಕೆ ಹೋಗಿ ವಾಪಸ್ಸು ಬರುವಾಗ ಈ ಘಟನೆ ಸಂಭವಿಸಿದ್ದು, ಕಾರು ಮರಕ್ಕೆ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗದ ಸಂಪೂರ್ಣ ಜಜ್ಜಿ ಹೋಗಿದೆ. ಪಕ್ಕದಲ್ಲಿದ್ದ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಲ್ಲಿಕಾರ್ಜುನ ಗೌಡ ಬಿಳವಾಣಿ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story