ಹರಿಹರ: ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಹರಿಹರ,ಜು.03: ವೇಗವಾಗಿ ಬಂದ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಹನಗವಾಡಿ ಬಳಿ ಭಾನುವಾರ ರಾತ್ರಿ ನಡೆದಿದೆ.
ಹನಗವಾಡಿ ಗ್ರಾಮದ ಗುಂಡಿಗೇರಿ ಬಸವರಾಜ್(50) ಮೃತ ಬೈಕ್ ಸವಾರ. ಹನಗವಾಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಸವರಾಜ್ ಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ಹೊಡೆದ ರಭಸಕ್ಕೆ ಬಸವರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story