ದಾವಣಗೆರೆಯ ಯೋಧ ನಿಗೂಢ ಸಾವು
ಬೆಂಗಳೂರು, ಜು.4: ತರಬೇತಿ ಕೇಂದ್ರದಲ್ಲಿ ಯೋಧನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಬೆಂಗಳೂರು ಹೊರವಲಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗಡಿ ಭದ್ರತಾ ಪಡೆ ತರಬೇತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾವಣಗೆರೆ ಮೂಲದ ಯೋಧ ವೀರೇಶ್ ಮೃತ ಯೋಧ ಎಂದು ತಿಳಿದುಬಂದಿದೆ.
ಈತ ನೀರಲ್ಲಿ ಬಿದ್ದು ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
Next Story