ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಆಪ್ತ ಸಮಾಲೋಚನಾ ಕೇಂದ್ರ ಉದ್ಘಾಟನೆ
ಧಾರವಾಡ, ಜು.7: ಇಲ್ಲಿನ ಕೇಂದ್ರ ಕಾರಾಗೃಹದ ಆಸ್ಪತ್ರೆ ವಿಭಾಗದಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಆಪ್ತ ಸಮಾಲೋಚನಾ ಕೇಂದ್ರವನ್ನು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ತನುಜಾ ಕೆ.ಎನ್. ಉದ್ಘಾಟಿಸಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕ್ಷಿ ಡಾ.ಅನಿತಾ ಆರ್. ಈ ಸಂದರ್ಭದಲ್ಲಿ ಮಾತನಾಡಿ, ಬಂಧಿಗಳು ತಮಗೆ ಏಡ್ಸ್ ಅಥವಾ ಕ್ಷಯ ರೋಗದ ಲಕ್ಷಣಗಳು ಕಂಡು ಬಂದರೆ ಸಕಾಲದಲ್ಲಿ ಯಾರಿಂದಲೂ ಸಲಹೆ ಪಡೆಯಲು ಸಾಧ್ಯವಾಗದೇ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಅಂತಹ ಸಂದರ್ಭಗಳಲ್ಲಿ ವೈಯಕ್ತಿಕವಾಗಿ ಸಮಾಲೋಚನೆ ನಡೆಸಲು ಅನುಕೂಲವಾಗುವಂತೆ ಈ ಸಂಸ್ಥೆಯಲ್ಲಿ ಆಪ್ತ ಸಮಾಲೋಚನಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಡಾ.ಅನಿತಾ ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಘಟಕ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಸಂಸ್ಥೆಯ ಸಿಬ್ಬಂದಿಗಳಿಗಾಗಿ ಕ್ಷಯ ರೋಗ ನಿಯಂತ್ರಣ ಮಾಹಿತಿ ಕಾರ್ಯಕ್ರಮ ಜರುಗಿತು.
Next Story