ಮುಂಡಗೋಡ: ವಿಷ ಸೇವಿಸಿ ರೈತ ಆತ್ಮಹತ್ಯೆ
ಮುಂಡಗೋಡ,ಜು.13: ಸಾಲಭಾದೆ ತಾಳಲಾರದೆ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಕೋಡಂಬಿ ಗ್ರಾ.ಪಂ ವ್ಯಾಪ್ತಿಯ ಅಶೋಕ ಭಜಂತ್ರಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ತನ್ನ ತಂದೆಯ ಹೆಸರಿನಲ್ಲಿದ್ದ ಹೊಲದ ಮೇಲೆ 1ಲಕ್ಷ ರೂ ಸಾಲ, ಎಲ್.ಎನ್.ಟಿ. ಕಂಪನಿಯಲ್ಲಿ ಟ್ರ್ಯಾಕ್ಟರ್ ಮೇಲೆ 7 ಲಕ್ಷ ರೂ ಸಾಲ ಮತ್ತು ತಾಯಿ ಹೆಸರಿನಲ್ಲಿ ಸಂಘ, ಹಾಗೂ ಕೈ ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದೆ.
ಮಾಡಿಕೊಂಡ ಸಾಲ ಹೇಗೆ ತೀರಿಸುವುದು ಎಂದು ಚಿಂತಿಸುತ್ತಾ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆಗೆ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮೃತನ ತಂದೆ ಗುರುವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story