ಕೊಳ್ಳೇಗಾಲ: ಗ್ರಾಮಸ್ಥರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ
ಕೊಳ್ಳೇಗಾಲ,ಜು.17: ತಾಲೂಕಿನ ದೊಡ್ಡಿಂದುವಾಡಿ ಗ್ರಾಮದೊಳಗೆ ಬಸ್ಗಳು ಬರುತ್ತಿಲ್ಲವೆಂದು ಆರೋಪಿಸಿ ಯುವಕರು ಹಾಗೂ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಗ್ರಾಮದ ಸುಮಾರು 30 ಕ್ಕೂ ಹೆಚ್ಚು ಮಂದಿ ಮಂಗಳವಾರ ಮಹದೇಶ್ವರ ಬೆಟ್ಟ ಹಾಗೂ ಕೊಳ್ಳೇಗಾಲ ಸಂಪರ್ಕಿಸುವ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು.
ಗ್ರಾಮದ ಜನರಿಗೆ ಹಾಗೂ ಶಾಲಾ ಕಾಲೇಜುಗಳಿಗೆ ಕೊಳ್ಳೇಗಾಲ ಪಟ್ಟಣಕ್ಕೆ ತೆರಳಲು ಬಸ್ ಇಲ್ಲದೆ ಪರದಾಡುತ್ತಿದಾರೆ. ಆದರೆ ಇದರ ಬಗ್ಗೆ ಶಾಸಕರ ಸ್ವಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತೆರಲು ಸಾಧ್ಯವಾಗದೇ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಸಂಬಂಧಪಟ್ಟವರು ಈ ಸಮಸ್ಯೆಯನ್ನು ಬಗೆಹರಿಸದಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಗ್ರಾಮಾಂತರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು. ಪ್ರತಿಭಟನೆಯಲ್ಲಿ ಮಲ್ಲರಾಜು, ನಾಗರಾಜು, ಸಿದ್ದರಾಜು, ಪುಟ್ಟಶೆಟ್ಟಿ ಹಾಗೂ ಇತರರು ಇದ್ದರು.
Next Story