ವಿದ್ಯಾಸಿರಿ ಯೋಜನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 06: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2018-19ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದವರಿಂದ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿಪರ್ಪಸ್ ಹಾಲ್ನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿ ಆಗಸ್ಟ್ 31ರೊಳಗೆ ಸಲ್ಲಿಸುವಂತೆ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ
.
Next Story