ಗುಂಡ್ಲುಪೇಟೆ: ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯ ಬಂಧನ
ಗುಂಡ್ಲುಪೇಟೆ,ಆ.06: ಸೂಕ್ಷ್ಮ ಪರಿಸರ ವಲಯದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡದಂತೆ ನೊಟೀಸ್ ನೀಡಲು ಹೋಗಿದ್ದ ಆರ್.ಎಫ್.ಓ ಮೇಲೆ ಹಲ್ಲೆ ಮಾಡಲೆತ್ನಿಸಿದ್ದ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಡೀಪುರ ರಾಷ್ಟ್ರೀಯ ಉದ್ಯಾನದ ಗೋಪಾಲಸ್ವಾಮಿಬೆಟ್ಟ ವಲಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ ಅನುಮತಿಯಿಲ್ಲದೆ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದ ಸುನಿಲ್ ಎಂಬುವರಿಗೆ ನೊಟೀಸ್ ನೀಡಲು ಹೋಗಿದ್ದಾಗ ತಮ್ಮ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರ್ಎಫ್ಒ ಪುಟ್ಟಸ್ವಾಮಿ ಪಟ್ಟಣದ ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಎಚ್.ಎನ್.ಬಾಲಕೃಷ್ಣ ಹಾಗೂ ಪಿ ಎಸ್ ಐ ಬಿ.ಎಸ್.ಶಿವರುದ್ರ ಹಾಗೂ ಸಿಬ್ಬಂದಿ ಇದ್ದರು.
Next Story