ಮಡಿಕೇರಿ: ಕೊಳೆತ ಸ್ಥಿತಿಯಲ್ಲಿ ಕಾಡಾನೆ ಕಳೇಬರ ಪತ್ತೆ
ಮಡಿಕೇರಿ, ಆ.6: ನಂಜರಾಯಪಟ್ಟಣ ಮೀಸಲು ಅರಣ್ಯದೊಳಗೆ ಕೊಳೆತ ಸ್ಥಿತಿಯಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ.
ಅರಣ್ಯ ಸಿಬ್ಬಂದಿ ಅರಣ್ಯದೊಳಗೆ ಗಸ್ತು ತಿರುಗುತ್ತಿದ್ದಾಗ 55 ವರ್ಷದ ಒಂಟಿ ದಂತದ ಕಾಡಾನೆಯೊಂದು ಸತ್ತು ಬಿದ್ದಿರುವುದು ಕಂಡು ಬಂದಿದೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ವಿಲಾಸ್ಗೌಡ ಹಾಗೂ ವೈದ್ಯಾಧಿಕಾರಿ ಡಾ.ಮುಝೀಬ್ ಸ್ಥಳಕ್ಕಾಗಮಿಸಿ ಮರಣೋತ್ತರ ಪರೀಕ್ಷೆ ನಡೆಸಿದರು.
ದಂತವನ್ನು ಅಧಿಕಾರಿಗಳು ವಶಕ್ಕೆ ಪಡೆದರು. ಕಳೆದ ಹತ್ತು ದಿನಗಳ ಹಿಂದೆ ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡ ಆನೆಯೊಂದು ಅರಣ್ಯದೊಳಗೆ ಪತ್ತೆಯಾಗಿತ್ತು. ಅದೇ ಕಾಡಾನೆ ಮರಣ ಹೊಂದಿರುವ ಬಗ್ಗೆ ಅಧಿಕಾರಿಗಳು ಶಂಕಿಸಿದ್ದಾರೆ.
Next Story