ಭದ್ರಾ ಜಲಾಶಯದಲ್ಲಿ ಈಜಲು ತೆರಳಿದ ವ್ಯಕ್ತಿ ನೀರುಪಾಲು: ಮುಂದುವರೆದ ಶೋಧ
ತರೀಕೆರೆ, ಆ.11: ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿರುವ ಭದ್ರಾ ಜಲಾಶಯ ವೀಕ್ಷಣೆಗೆ ಬಂದಿದ್ದ ದಾವಣಗೆರೆ ಮೂಲದ ವ್ಯಕ್ತಿಯೊಬ್ಬರು ಜಲಾಶಯದ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆಯ ಪಾಮೇನಹಳ್ಳಿ ಗ್ರಾಮದ ನಿವಾಸಿ ಬಸವರಾಜ್(40) ನಾಪತ್ತೆಯಾದ ವ್ಯಕ್ತಿ ಎಂದು ತಿಳಿದು ಬಂದಿದ್ದು, ಇವರು ತನ್ನ ನಾಲ್ವರು ಸ್ನೇಹಿತರೊಂದಿಗೆ ಕಳೆದ ಜು.9ರಂದು ತಾಲೂಕಿನ ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯಕ್ಕೆ ಬಂದಿದ್ದರು ಎನ್ನಲಾಗಿದ್ದು, ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಐವರು ಸ್ನೇಹಿತರ ಪೈಕಿ ಬಸವರಾಜ್ ಜಲಾಶಯದ ನೀರಿನಲ್ಲಿ ಮುಳುಗಿದ್ದಾರೆಂದು ತಿಳಿದು ಬಂದಿದೆ.
ಬಸವರಾಜ್ ಅವರು ಎರಡು ದಿನ ಕಳೆದರೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದ್ದು, ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಶೋಧ ಮುಂದುವರೆಸಿದ್ದಾರೆಂದು ತಿಳಿದು ಬಂದಿದೆ.
Next Story