ಕೂಲಂಕಷ ಅಧ್ಯಯನದ ನಂತರ ಮುಂದಿನ ನಡೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಮಹಾದಾಯಿ ನ್ಯಾಯಾಧೀಕರಣ ತೀರ್ಪು
ಬೆಂಗಳೂರು, ಆ.14: ಮಹಾದಾಯಿ ಜಲ ವಿವಾದ ಕುರಿತು ನ್ಯಾಯಾಧೀಕರಣವು ನೀರು ಹಂಚಿಕೆ ಕುರಿತು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಿದ್ದು, ಅದರಲ್ಲಿರುವ ಅಂಶಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ಬಳಿಕ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ನಾನು ಈಗಾಗಲೇ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಈ ವಿಷಯ ಚರ್ಚಿಸಿದ್ದು, ನ್ಯಾಯಾಧೀಕರಣದ ತೀರ್ಪು 12 ಸಂಪುಟಗಳಷ್ಟಿದ್ದು, ಅದನ್ನು ಕೂಲಂಕಷವಾಗಿ ಅದ್ಯಯನ ನಡೆಸಿದ ನಂತರ ಎಲ್ಲರೊಂದಿಗೆ ಸಮಾಲೋಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story