ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ದಾವಣಗೆರೆ,ಆ.15: ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ (ಡಾ. ಶಾಮನೂರು ಶಿವಶಂಕರಪ್ಪ ಭವನ) 72ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪರವರು ಧ್ವಜಾರೋಹಣ ನೇರವೇರಿಸಿದರು.
ಮಹಾಪೌರರಾದ ಶೋಭಾ ಪಲ್ಲಾಗಟ್ಟೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್.ಕೆ.ಶೆಟ್ಟಿ, ಕೆ.ಜಿ.ಶಿವಕುಮಾರ್, ಎ.ನಾಗರಾಜ್, ದಾವಣಗೆರೆ ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಖಾಲಿದ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ಕೆ.ಎಲ್.ಹರೀಶ್, ಸದ್ದಾಂ, ಎನ್ಎಸ್ಯುಐನ ಮುಜಾಹಿದ್, ಯುವರಾಜ್, ದ್ರಾಕ್ಷಾಯಣಮ್ಮ, ವೀಣಾ ಮಂಜುನಾಥ್, ಶುಭಮಂಗಳ ಮತ್ತಿತರರಿದ್ದರು.
Next Story