ಚಿಕ್ಕಮಗಳೂರು: ಅತಿವೃಷ್ಟಿಯಿಂದ ರಸ್ತೆ ಕುಸಿತ; ಜಿಲ್ಲಾಧಿಕಾರಿ ಭೇಟಿ
ಚಿಕ್ಕಮಗಳೂರು, ಆ.17: ಜಿಲ್ಲೆಯ ಮಲೆನಾಡು ತಾಲೂಕುಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಸ್ಥಳಗಳಿಗೆ ಶುಕ್ರವಾರ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅವರು ಶುಕ್ರವಾರ ಬೆಳಗ್ಗೆ ಎನ್.ಆರ್.ಪುರ ತಾಲೂಕಿನ ಮೇಲ್ಪಾಲು-ಹೊಡ್ಸಲು ಗ್ರಾಮದ ಸಂಪರ್ಕ ರಸ್ತೆ ಸುಮಾರು 300 ಮೀ. ಉದ್ದ, 10 ಅಡಿ ಆಳಕ್ಕೆ ಕುಸಿದು ಬಿದ್ದ ಸ್ಥಳಕ್ಕೆ ಭೇಟಿ ನೀಡಿದ ಅವರು, ಪರಿಶೀಲನೆ ನಡೆಸಿದ್ದು, ರಸ್ತೆ ದುರಸ್ತಿ ಸಂಬಂಧ ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಂದಿಗೆ ಚರ್ಚಿಸಿದ್ದು, ಶೀಘ್ರ ಕ್ರಮ ವಹಿಸುವುದಾಗಿ ಗ್ರಾಮದ ಮುಖಂಡರಿಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
Next Story