ಕೊಡಗು ವಿಕೋಪ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಮಡಿಕೇರಿ, ಆ. 24: ಇಲ್ಲಿನ ಬ್ರಾಹ್ಮಣರ ಕಲ್ಯಾಣ ಮಂಟಪ ಹಾಗು ಮೈತ್ರಿ ಹಾಲ್ ಪರಿಹಾರ ಕೇಂದ್ರಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಭೇಟಿ ನೀಡಿದರು.
ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ ನೀವು ಕಳೆದುಕೊಂಡಿರುವ ನೆಮ್ಮದಿಯ ಬದುಕನ್ನು ಮತ್ತೆ ತಂದುಕೊಡಲು ಸಾಧ್ಯವಿಲ್ಲ. ಆದರೆ ಕೇಂದ್ರ, ರಾಜ್ಯ ಸರಕಾರಗಳು ಹೊಸ ಬದುಕು ರೂಪಿಸಿ ಕೊಡಲು ಬದ್ಧವಾಗಿದೆ. ಪ್ರಕೃತಿ ವಿಕೋಪದ ಸಂದರ್ಭ ಪಕ್ಷ ಭೇದ ಮರೆತು ಕೆಲಸ ಮಾಡಬೇಕು. ಕೊಡಗು ಜಿಲ್ಲೆಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದ ಜೊತೆಗೆ ಸ್ವಯಂ ಸೇವಾ ಸಂಘಗಳು ಕೈಜೋಡಿಸಿರುವುದು ಶ್ಲಾಘನೀಯ” ಎಂದು ಹೇಳಿದರು.
Next Story