ಹನೂರು: ಕೊಡಗು ನೆರೆ ಸಂತ್ರಸ್ತರ ನೆರವಿಗಾಗಿ ದೇಣಿಗೆ ಸಂಗ್ರಹ
ಹನೂರು,ಆ.28: ಹನೂರು ಪಟ್ಟಣದಲ್ಲಿ ಕಾರು, ಗೂಡ್ಸ್ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರ ಪರಿಹಾರಕ್ಕೆ ದೇಣಿಗೆ ಸಂಗ್ರಹಿಸಲಾಯಿತು.
ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಜತೆಗೂಡಿ ಪಟ್ಟಣದ ಮುಖ್ಯ ರಸ್ತೆ ಸೇರಿದಂತೆ ಅಂಗಡಿ ಮುಂಗಟ್ಟುಗಳ ಬೀದಿಯಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ದೇಣಿಗೆ ಸಂಗ್ರಹಿಸಿದರು.
ನಂತರ ಮಾತನಾಡಿದ ಆಟೋ ಚಾಲಕ ಬಸವರಾಜು, ಕೊಡಗು ಜಿಲ್ಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕಿದೆ. ಆದುದರಿಂದ ತಮ್ಮ ಕೈಲಾದ ಸಹಾಯ ಮಾಡಬೇಕೆಂದು ಮನವಿ ಮಾಡಿದರು. ಸಂಗ್ರಹವಾದ ದೇಣಿಗೆಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
ದೇಣಿಗೆ ಸಂಗ್ರಹಣದ ವೇಳೆ ಹನೂರು ಟೌನ್ ಯೂತ್ ಕಾಂಗ್ರೆಸ್ ಅದ್ಯಕ್ಷ ಸತೀಸ್ ಸಾಥ್ ನೀಡಿದರು. ಈ ಸಂದರ್ಭ ಆಟೋ ಚಾಲಕರು ಮತ್ತು ಮಾಲಿಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
Next Story