ಗುಂಡ್ಲುಪೇಟೆ: ಲಾರಿ ಚಾಲಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಗುಂಡ್ಲುಪೇಟೆ,ಆ.30: ಪಟ್ಟಣ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಲಾರಿಚಾಲಕನ ಶವಪತ್ತೆಯಾಗಿದೆ.
ಪುರಸಭೆ ಕಚೇರಿ ಸಮೀಪವಿರುವ ವಾಣಿಜ್ಯ ಸಂಕೀರ್ಣದ ಮೆಟ್ಟಿಲುಗಳ ಬಳಿ ನೇಣುಬಿಗಿದ ಸ್ಥಿತಿಯಲ್ಲಿ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವ(40) ಎಂಬಾತನ ಶವ ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದರು.
ಮೃತನ ಪತ್ನಿ ಸುವರ್ಣಮ್ಮ 'ತನ್ನ ಗಂಡ ಆತ್ಮಹತ್ಯೆ ಮಾಡಿಕೊಂಡಿಲ್ಲ. ಯಾರೋ ಕೊಲೆ ಮಾಡಿದ್ದಾರೆ' ಎಂದು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Next Story