ಶಿವಮೊಗ್ಗ: ಜಮೀನಿನಲ್ಲಿ ಗಾಂಜಾ ಬೆಳೆದ ರೈತ; ಕೇಸ್ ದಾಖಲು
ಶಿವಮೊಗ್ಗ, ಸೆ. 1: ಬಗರ್ ಹುಕುಂ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ರೈತನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಹಿರೇಕೊರಲಹಳ್ಳಿ ಗ್ರಾಮದ ರೈತ ಈಶ್ಯಾನಾಯ್ಕ್ (40) ಎಂಬುವರೇ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತ ಎಂದು ಗುರುತಿಸಲಾಗಿದೆ. ಇವರಿಗೆ ಹಿರೇಕೊರಲಹಳ್ಳಿ ಗ್ರಾಮದ ಸರ್ವೇ ನಂಬರ್ 39 ರಲ್ಲಿ ಬಗರ್ಹುಕುಂ ಜಮೀನಿದ್ದು, ಇದರಲ್ಲಿ ಗಾಂಜಾ ಬೆಳೆದಿದ್ದರು.
ಈ ಕುರಿತಂತೆ ಪೊಲೀಸರಿಗೆ ಖಚಿತ ವರ್ತಮಾನ ಲಭಿಸಿದ್ದು ದಾಳಿ ನಡೆಸಿದ್ದಾರೆ. ಸುಮಾರು 4 ಕೆ.ಜಿ. ತೂಕದಷ್ಟು ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಾಗಿದೆ.
Next Story