ಶಿವಮೊಗ್ಗ: ನೇಣು ಬಿಗಿದು ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ, ಸೆ. 9: ಮನೆಯಲ್ಲಿಯೇ ನೇಣು ಬಿಗಿದು ಎಸೆಸೆಲ್ಸಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಗಾಂಧಿನಗರದ ಕಂಬಳಿಕೇರಿಯಲ್ಲಿ ನಡೆದಿದೆ.
ಕಾರ್ತಿಕ್ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಸಾಗರ ಪಟ್ಟಣದ ಖಾಸಗಿ ಪ್ರೌಢಶಾಲೆಯೊಂದರಲ್ಲ ಅಭ್ಯಾಸ ಮಾಡುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ನೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story