ದಾವಣಗೆರೆ: ನೀರುಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆ
ದಾವಣಗೆರೆ, ಸೆ. 12: ಈಜಲು ಹೋಗಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆಯಾದ ಘಟನೆ ಹರಿಹರ ತಾಲ್ಲೂಕಿನ ದೇವರಬೆಳಕೆರೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ ಮೂಲದ ಯುವಕರು ಪಾರ್ಟಿ ಮಾಡಲು ಪಿಕಪ್ ಡ್ಯಾಂ ಗೆ ಹೋಗಿದ್ದು, ಪಾರ್ಟಿ ಮುಗಿಸಿ ಈಜಲು ಹೋಗಿದ್ದ ಮೂರು ಮಂದಿಯಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಓರ್ವ ಅಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆಯ ಮನೋಜ್ (24), ಮಂಜುನಾಥ (25), ಮೃತ ಸಹೋದರರು ಎಂದು ಗುರುತಿಸಲಾಗಿದೆ.
ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story