15 ಬಿಜೆಪಿ ಶಾಸಕರು 'ಕೈ' ಸೇರಲು ಇಂಗಿತ: ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯ
ಬೆಂಗಳೂರು, ಸೆ.12: ಬಿಜೆಪಿಯ 15 ಶಾಸಕರು ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ದೊಡ್ಡಬಳ್ಳಾಪುರ ಕಾಂಗ್ರೆಸ್ ಶಾಸಕ ವೆಂಕಟರಮಣಯ್ಯ ಹೇಳಿದ್ದಾರೆ.
ಬುಧವಾರ ದೊಡ್ಡಬಳ್ಳಾಪುರದ ಗೀತಂ ಯೂನಿವರ್ಸಿಟಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ನಿನ್ನೆ ರಾತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿಯ ಕೆಲವು ಶಾಸಕರೊಂದಿಗೆ ರಹಸ್ಯ ಸಭೆ ನಡೆಯಿತು. ಆ ಸಭೆಯಲ್ಲಿ ನಾನೂ ಸಹ ಭಾಗಿಯಾಗಿದ್ದೆ. ಬಿಜೆಪಿ ಬಂಡಾಯ ಶಾಸಕರೊಂದಿಗಿನ ಮಾತುಕತೆ ಫಲಪ್ರದವಾಗಿದೆ. ಒಂದು ವೇಳೆ ಆಪರೇಷನ್ ಕಮಲ ನಡೆದರೆ 15 ಬಿಜೆಪಿ ಶಾಸಕರು ನಮ್ಮತ್ತ ಬರಲು ಸಿದ್ಧರಾಗಿ ನಿಂತಿದ್ದಾರೆ ಎಂದು ಅವರು ಹೇಳಿದರು.
Next Story