ಸಿದ್ಧರಾಮಯ್ಯ ಭೇಟಿಗೆ ಬೆಂಗಳೂರಿಗೆ ಧಾವಿಸಿದ ರಮೇಶ್ ಜಾರಕಿಹೊಳಿ
ಬೆಂಗಳೂರು, ಸೆ.17: ವಿದೇಶದಿಂದ ವಾಪಸಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಲು ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಿಂದ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಜಾರಕಿಹೊಳಿಗೆ ಸಂಸದ ಪ್ರಕಾಶ್ ಹುಕ್ಕೇರಿ ಹಾಗೂ ಶಾಸಕ ಗಣೇಶ್ ಹುಕ್ಕೇರಿ ಸಾಥ್ ನೀಡಿದ್ದಾರೆ.
ಸಿದ್ದರಾಮಯ್ಯನವರ ಕಾವೇರಿ ನಿವಾಸಕ್ಕೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಶಾಸಕರಾದ ಡಾ. ಸುಧಾಕರ್ ಹಾಗೂ ಎಂಟಿಬಿ ನಾಗರಾಜ್ ಅವರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.
Next Story