ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ: ಸಚಿವ ಎನ್.ಮಹೇಶ್
ಚಾಮರಾಜನಗರ,ಸೆ.21: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಯಾವುದೇ ಗಂಡಾಂತರ ಇಲ್ಲ. ಸರ್ಕಾರ ಸೇಫಾಗಿದೆ. ಸರ್ಕಾರದ ಶಾಸಕರು, ಸಚಿವರು ಎಲ್ಲೂ ಹೋಗಿಲ್ಲ. ಹೋಗುವ ಪ್ರಮೇಯವೂ ಬರಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದರು.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮುಡಿಗುಂಡಂ ಬಳಿ ನಿರ್ಮಾಣವಾಗಿರುವ ಆದರ್ಶ ಶಾಲೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಸಚಿವರು ಮತ್ತು ಶಾಸಕರು ಎಲ್ಲೂ ಹೋಗಿಲ್ಲ. ಅವರೆಲ್ಲರೂ ರಾಜ್ಯದಲ್ಲೇ ಇದ್ದಾರೆ ಎಂದು ತಿಳಿಸಿದ ಅವರು, ಸರ್ಕಾರವು ಉತ್ತಮವಾಗಿ ಆಡಳಿತ ನಡೆಸುತ್ತಿದೆ ಎಂದರು.
ಈ ಸಂದರ್ಭ ಚಾಮರಾಜನಗರ ಲೋಕಸಭಾ ಸದಸ್ಯ ಆರ್. ದ್ರುವನಾರಾಯಣ್ ಸೇರಿದಂತೆ ಅನೇಕರು ಇದ್ದರು.
Next Story