ಮಹಿಷಾ ದಸರಾಗೆ ಅವಕಾಶ ಬೇಡ, ಟಿಪ್ಪು ಜಯಂತಿ ನಿಲ್ಲಿಸಿ: ಸಂಸದ ಪ್ರತಾಪ್ ಸಿಂಹ
ಮೈಸೂರು, ಅ.10: ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಮಹಿಷ ದಸರಾ ಆಚರಣೆಗೆ ಅವಕಾಶ ಕೊಟಿದ್ದು ಸರಿಯಲ್ಲ. ಇಂತಹ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿಂದು ಮಾತನಾಡಿದ ಅವರು, ಈ ಕುರಿತಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.
ಅದೇರೀತಿ ಯದುವಂಶದ ದೊರೆಗಳನ್ನು 38 ವರ್ಷಗಳ ಕಾಲ ಜೈಲಿನಲ್ಲಿಟ್ಟಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆಯೂ ಅವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
Next Story